ಚಿಕ್ಕಮಗಳೂರು: ಫಾಲ್ಸ್ ನಲ್ಲಿ ಕಾಲು ಜಾರಿ ಬಿದ್ದು ಯುವಕ ಮೃತ್ಯು

  June 11,2024
news-banner
ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ನಲ್ಲಿ ಜಲಪಾತ ನೋಡಲು ಬಂದಿದ್ದ ಪ್ರವಾಸಿಗನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮೃತ ಯುವಕ ಹೈದರಾಬಾದ್ ಮೂಲದ ಶ್ರವಣ್(25) ಎಂದು ತಿಳಿದು ಬಂದಿದೆ.

ಶ್ರವಣ್ ಮತ್ತು ಸ್ನೇಹಿತ ಹೈದರಾಬಾದ್ ನಿಂದ‌ ಕಾಫಿನಾಡಿನ ಪ್ರವಾಸ ಕೈಗೊಂಡಿದ್ದರು. ಸೋಮವಾರ ಬೆಳಿಗ್ಗೆ ಬೈಕ್‌ನಲ್ಲಿ ಹೆಬ್ಬೆ ಫಾಲ್ಸ್ ಗೆ ತೆರಳಿದ್ದರು ಎಂದು ತಿಳಿದು ಬಂದಿದೆ. 

ಹೆಬ್ಬೆ ಫಾಲ್ಸ್ ನಲ್ಲಿ ಸೆಲ್ಫಿ ತೆಗೆಯುವ ವೇಳೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು‌ ತಿಳಿದು ಬಂದಿದೆ.

Leave Your Comments