ವಾಟ್ಸಪ್ ಸ್ಟೇಟಸ್ ಹಾಕಿ ತುಂಗಾ ನದಿಗೆ ಹಾರಿದ ಯುವಕನ ಮೃತದೇಹ ಪತ್ತೆ

  September 2,2024
news-banner
ತೀರ್ಥಹಳ್ಳಿ: ಡಿಗ್ರಿಯಲ್ಲಿ ಚೆನ್ನಾಗಿ ಓದುತ್ತಿದ್ದ ರ‍್ಯಾಂಕ್ ತೆಗೆದುಕೊಳ್ಳುವಂತ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಕೆಲವೊಂದು ಮಾಹಿತಿ ಹಂಚಿಕೊಂಡು ತುಂಗಾ ನದಿಗೆ ಹಾರಿದ್ದು, ಸೋಮವಾರ ಆತನ ಮೃತದೇಹ ಪತ್ತೆಯಾಗಿರುವ ಘಟನೆ ವರದಿಯಾಗಿದೆ.

ಮೃತ ಯುವಕ ಇಂದಾವರ ಗ್ರಾಮದ ಯುವಕ ಜಯದೀಪ್  (24) ಎಂದು ತಿಳಿದು ಬಂದಿದೆ. 

ಶನಿವಾರ ಬೆಳಗ್ಗೆ ವಾಟ್ಸಪ್ ಸ್ಟೇಟಸ್ ಹಾಕಿ ತುಂಗಾ ನದಿಯ ಸಮೀಪ ಬೈಕ್ ನಿಲ್ಲಿಸಿ ಯುವಕ ನಾಪತ್ತೆಯಾಗಿದ್ದ. ನಂತರ ತುಂಗಾ ನದಿಗೆ ಹಾರಿರಬಹುದು ಎಂಬ ಅನುಮಾನದಿಂದ ಪೋಲೀಸ್, ಅಗ್ನಿಶಾಮಾಕದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದರು. ಆದರೆ ಸ್ವಲ್ಪ ದೂರದಲ್ಲಿರುವ ತುಂಗಾ ನದಿ ಸ್ಮಶಾನಕಟ್ಟೆ ಸಮೀಪ ಆತನ ಶವ ಸಿಕ್ಕಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave Your Comments