ಬಸ್ ಪಲ್ಟಿ: ಐವರಿಗೆ ಗಾಯ

  September 3,2024
news-banner
ಶಿಡ್ಲಘಟ್ಟ: ತಾಲೂಕಿನ ಅಮ್ಮಗಾರಹಳ್ಳಿ ಕ್ರಾಸ್ ಬಳಿ  ಶಿಡ್ಲಘಟ್ಟ-ದಿಬ್ಬೂರಹಳ್ಳಿ ರಸ್ತೆ ಮಾರ್ಗವಾಗಿ ಚಿಕ್ಕಬಳ್ಳಾಪುರದಿಂದ ಚೇಳೂರಿಗೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ಸೋಮವಾರ ರಾತ್ರಿ ನಡೆದಿದೆ.

ತಾಲೂಕಿನಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ರಾತ್ರಿ ಸುಮಾರು 8 ಗಂಟೆ ಸುಮಾರಿನಲ್ಲಿ ವಿಪರೀತ ಮಳೆ ಬೀಳುವಾಗ ದಾರಿ ಕಾಣದೇ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ಅದೃಷ್ಟವಶಾತ್ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಐದು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಆ್ಯಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

Leave Your Comments