ಹುಬ್ಬಳ್ಳಿ: ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಪೋಷಕರು ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ಅಪ್ರಾಪ್ತ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗಾಮನಗಟ್ಟಿ ರಸ್ತೆಯ ರಾಧಿಕಾ ಪಾರ್ಕ್ನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕ ಸಮೃದ್ದ ಭೈರಿದೇವರಕೊಪ್ಪ (13) ಎಂದು ತಿಳಿದು ಬಂದಿದೆ.
ಈತನಿಗೆ ಪೋಷಕರು ಮೊಬೈಲ್ ಹೆಚ್ಚು ಬಳಸಬೇಡ. ಸರಿಯಾಗಿ ವಿದ್ಯಾಭ್ಯಾಸ ಮಾಡು ಎಂದು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಈ ಕುರಿತು ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.