ಬಿಬಿಎಂಪಿ ಕಸದ ಟೆಂಡರ್ ಕೊಡಿಸುವುದಾಗಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

  January 21,2025
news-banner
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಬಿಎಂಪಿ ಕಸದ ಟೆಂಡರ್ ಕೊಡಿಸುವುದಾಗಿ ನೆರೆ ಮನೆಯ ವ್ಯಕ್ತಿಯೋರ್ವ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿರುವ ಘಟನೆ ನಡೆದಿದೆ. 

ಹೇರೋಹಳ್ಳಿಯ ಸೌಭಾಗ್ಯ ಎಂಬವರಿಗೆ ವಂಚಿಸಿದ್ದ ಬಿಬಿಎಂಪಿ ಕಸದ ಗುತ್ತಿಗೆದಾರ ಹರೀಶ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ನಿಮ್ಮ ಬಳಿ ಇರುವ ಚಿನ್ನಾಭರಣ ಒತ್ತೆ ಇಟ್ಟು ಹಣ ತಂದು ಕೊಡಿ ಅಂದಿದ್ದ ಹರೀಶ್, 90 ಗ್ರಾಂ ಚಿನ್ನವನ್ನು ಕೊಟ್ಟಿದ್ದ ಮಹಿಳೆ, ನೀವೆ ಒತ್ತೆ ಇಟ್ಟು ಹಣ ತಗೊಳಿ ಎಂದಿದ್ದಾರೆ. ಹಣ ಕೊಡುವಾಗ ಗೋಪಾಲ್ ಹಾಗೂ ಪಿಳ್ಳರಾಜು ಎಂಬುವರನ್ನು ಸಾಕ್ಷಿ ಇಟ್ಟು ಹಣ ಹಾಗೂ ಚಿನ್ನಾಭರಣವನ್ನು ಸೌಭಾಗ್ಯ ಕೊಟ್ಟಿದ್ದಾರೆ. ಆದರೆ ಎರಡು ವರ್ಷದಿಂದ ಹಣವೂ ಇಲ್ಲ, ಟೆಂಡರ್ ಇಲ್ಲದೆ ವಂಚನೆ ಮಾಡಿದ್ದಾರೆ. ಬಳಿಕ ಸೌಭಾಗ್ಯ ದೂರು ನೀಡಿದ್ದು, ಇದೀಗ ಗುತ್ತಿಗೆದಾರ ಹರೀಶ್ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave Your Comments