ಕಾಸರಗೋಡು: ಪೆರ್ಲ ದಲ್ಲಿ ಮನೆಗೆ ನುಗ್ಗಿದ ಕಳ್ಳರು ಎಂಟು ಪವನ್ ಚಿನ್ನಾಭರಣ ಹಾಗೂ ಒಂದು ಲಕ್ಷ ರೂ.ನಗದು ಕಳವುಗೈದ ಘಟನೆ ನಡೆದಿದೆ.
ಪೆರ್ಲ ಇಡಿಯಡ್ಕ ದ ಅಬ್ಬಾಸ್ ಅಲಿ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ ಎಂದು ತಿಳಿದು ಬಂದಿದೆ.
ಮನೆಯ ಹಿಂಭಾಗದ ಬಾಗಿಲನ್ನು ಮುರಿದು ಒಳಗೆ ಪ್ರವೇಶಿಸಿದ ಕಳ್ಳರು ಕೋಣೆಯಲ್ಲಿದ್ದ ಕಪಾಟನ್ನು ಮುರಿದು ಕಳವು ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಮನೆಯವರು ಮಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ ಈ ಕೃತ್ಯ ನಡೆದಿದೆ. ಘಟನಾ ಸಂಬಂಧ ಬದಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.